ಮರೋಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

0

ಮರೋಡಿ: ಗ್ರಾಮ ಪಂಚಾಯತ್ ಮರೋಡಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಿರ್ತಾಡಿ ಇವರ ಸಹಯೋಗದಲ್ಲಿ ಮರೋಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ದಿಕ್ಸೂಚಿ ಭಾಷಣ ಮಾಡಿದರು.

ಬೆಳ್ಳಿಬೀಡು ಪಾರ್ಶ್ವನಾಥ ಸ್ವಾಮಿ ಬಸದಿಯ ಹೇಮರಾಜ್ ಕೆ, ಶಿರ್ತಾಡಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಾಖಾ ವ್ಯವಸ್ಥಾಪಕ ಜೈದೇವ್ ಮಿಶ್ರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾಂತಪ್ಪ, ಸಹಾಯಕ ಕೃಷಿ ಅಧಿಕಾರಿ ಅಭಿಲಾಷ್, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಭಾರಿ ಅಭಿಜಿತ್ ಜೈನ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಶ್ರೀ ಜೈನ್, ಯಶೋಧರ ಆಚಾರ್ಯ, ಅಶೋಕ ಪೂಜಾರಿ, ಉಮೇಶ್ ಸಾಲಿಯಾನ್, ಧನಲಕ್ಷ್ಮೀ, ಉಮಾವತಿ, ಸಮಿತಾ, ಸುನಂದಾ, ಯಶೋಧಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎರಡು ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ವಿತರಿಸಲಾಯಿತು.ಕೃಷಿ, ಶೈಕ್ಷಣಿಕ, ಕೇಂದ್ರ ಸರ್ಕಾರದ ಯೋಜನೆಯಡಿ ಪ್ರಯೋಜನ ಪಡೆದು ಯಶಸ್ವಿಯಾದ ಉದ್ಯಮಗಳನ್ನು ಗೌರವಿಸಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here