ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಮಾಸಿಕ ಸಭೆ

0

ಸುಲ್ಕೇರಿ: ಸುಲ್ಕೇರಿ ಗ್ರಾಮದ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ (ರಿ.) ಬ್ರಹ್ಮಗಿರಿ, ಸುಲ್ಕೇರಿ, ಇದರ ಡಿಸಂಬರ್ ತಿಂಗಳ ಮಾಸಿಕ ಸಭೆಯು ಅಧ್ಯಕ್ಷ ಕೊರಗಪ್ಪ ಪೂಜಾರಿಯವರ ನೇತೃತ್ವದಲ್ಲಿ ನಡೆಸಲಾಯಿತು.

ಫೆಬ್ರವರಿ ತಿಂಗಳಲ್ಲಿ ನಡೆಯುವ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯ ಬಗ್ಗೆ ವಿಮರ್ಶೆ ನಡೆಸಿ, ಎಲ್ಲರೂ ಸಹಕರಿಸಿ, ದೇವರ ಕೃಪೆಗೆ ಪಾತ್ರರಾಗಬೇಕೆಂದು ಗೌರವಾಧ್ಯಕ್ಷ ಸುಧೀರ್.ಎಸ್.ಪಿ
ರವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಡೀಕಯ್ಯ ಪೂಜಾರಿ, ಕೋಶಾಧಿಕಾರಿ ಹರೀಶ್ ಪೂಜಾರಿ, ಉಪಾಧ್ಯಕ್ಷ ಶಂಕರ್ ಪೂಜಾರಿ, ಯಶೋಧರ್ ಪೂಜಾರಿ, ನಿರ್ದೇಶಕರುಗಳಾದ ವಸಂತ ಪೂಜಾರಿ, ಪ್ರದೀಪ್, ರಮೇಶ್ ಪೂಜಾರಿ, ಗುರುಪ್ರಸಾದ್ ಪೂಜಾರಿ, ಸುನಿಲ್ ಪೂಜಾರಿ, ಕೀರ್ತನ್ ಪೂಜಾರಿ ಹಾಗೂ ಸಂಘದ ಸರ್ವಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here