ವಾರ್ಷಿಕ ಪ್ರತಿಭಾ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ

0

ಪುದುವೆಟ್ಟು: ಡಿ.29ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಸ್ಥಳೀಯ ಪ್ರಗತಿಪರ ಕೃಷಿಕ ಚಿತ್ತರಂಜನ್ ಜೈನ್ ರವರ ದಿವ್ಯ ಹಸ್ತದಿಂದ ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ರಂಜಿತ್ ರವರು ಉಪಸ್ಥಿತರಿದ್ದರು.

ಧ್ವಜಾರೋಹಣವನ್ನು ನೆರವೇರಿಸಿದ ಚಿತ್ತರಂಜನ್ ಜೈನ್ ಅವರು ಮಾತನಾಡಿ ಈ ದಿನದ ವಾರ್ಷಿಕ ಪ್ರತಿಬಾ ದಿನಾಚರಣೆಯ ಎಲ್ಲ ಕಾರ್ಯಕ್ರಮಗಳು ಕೂಡ ಯಾವುದೇ ವಿಘ್ನಗಳಿಲ್ಲದೆ ಒಳ್ಳೆಯ ರೀತಿಯಲ್ಲಿ ಮೂಡಿ ಬರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಂಜಿತ್ ರವರು ಈ ದಿನ ವಿದ್ಯಾರ್ಥಿಗಳಿಗೆ ಎಲ್ಲರಿಗೂ ಕೂಡ ಮನೋರಂಜನೆಯ ದಿನವಾಗಿರುವಂಥದ್ದು.ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಈ ದಿನವನ್ನು ಒಳ್ಳೆಯ ರೀತಿಯಲ್ಲಿ ಆನಂದಿಸಿ ಎಂದು ತಿಳಿಸಿದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ನುಡಿದರು.ಶಾಲಾ ಶಿಕ್ಷಕ ನಿಶಾಂತ್ ರವರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ನೆರೆದಿದ್ದ ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here