Site icon Suddi Belthangady

ವೇಣೂರು: ಶ್ರೀ ಧ.ಮಂ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನವೀಕರಣಗೊಂಡ ಪ್ರಾಚಾರ್ಯರ ಕೊಠಡಿಯ ಉದ್ಘಾಟನೆ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನವೀಕರಣಗೊಂಡ ಪ್ರಾಚಾರ್ಯರ ಕೊಠಡಿಯ ಉದ್ಘಾಟನೆ ಜ.1ರಂದು ನಡೆಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್ ಜೈನ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶುಭ ಹಾರೈಸಿದರು.ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ ಆರ್ ರವರು ಸಂಸ್ಥೆಗೆ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸಿ ಕೃತಜ್ಞತಾ ಪತ್ರವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿ ಜಗನ್ನಾಥ ದೇವಾಡಿಗ, ಕಿರಿಯ ತರಬೇತಿ ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version