ಜ.29-ಫೆ.2: ಶಿರ್ಲಾಲು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯರು ಜಾತ್ರಾ ಮಹೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ

0

ಶಿರ್ಲಾಲು: ಬದ್ಯರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವ ಜ.29ರಿಂದ ಫೆ.2 ರ ವರೆಗೆ ನಡೆಯಲಿದ್ದು, ಇದರ ಪ್ರಯುಕ್ತವಾಗಿ ಇಂದು (ಜ.1) ಚಪ್ಪರ ಮುಹೂರ್ತ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ರಾವ್, ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜಲು, ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಟೈಲರ್, ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್, ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಆಕಾಶ್, ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here