ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಹೊಸವರ್ಷ ಸಂಭ್ರಮಾಚರಣೆ

0

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 11ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ಜ.01ರಂದು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಡಾ.ಕಲಾಮಧುರವರು ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ವಿ.ಟಿ.ಸೆಬಾಸ್ಟಿನ್‌ರವರು ಹೊಸವರ್ಷಕ್ಕೆ ಶುಭಾಶಯಗಳನ್ನು ಕೋರಿ ಒಂದೆರಡು ಮಾತುಗಳನ್ನಾಡಿದರು.ಟ್ರಸ್ಟಿ ಸದಸ್ಯರಾದ ಮೇರಿ ಯು.ಪಿ.ಯವರು, ಹಿತೈಷಿಗಳಾದ ಮಹೇಶ್ ಅಖಿಲ್ ಟ್ರಾನ್ಸ್ ಪೋರ್ಟ್, ರಂಜಿತ್, ಡಾ.ಗೋಪಿಕೃಷ್ಣ ಹಾಗೂ ವಾಹನ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಜೋಸೆಫ್ ಪಿ.ಪಿ.ಯವರು ವೇದಿಕೆಯನ್ನಲಂಕರಿಸಿದ್ದರು.

ಸಿಯೋನ್ ಆಶ್ರಮ ನಿವಾಸಿಗಳಿಗೋಸ್ಕರ ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ ನೆರೆಕರೆಯ ಗ್ರಾಮಸ್ಥರು ಒಂದು ದಿನದ ಅನ್ನದಾನ ನೀಡುತ್ತಿದ್ದು, ಈ ಕಾರ್ಯಕ್ರಮದ ಮುಂದಾಳತ್ವವನ್ನು ಚಾಲಕ-ಮಾಲಕರ ಸಂಘದ ಅಧ್ಯಕ್ಷ ಜೋಸೆಫ್ ಪರುವಕಾರನ್ ಮತ್ತು ಡೆನ್ನಿಯವರು ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.ಸಿಬ್ಬಂದಿ ದಿನವತಿಯವರು ಸ್ವಾಗತಿಸಿ, ಆಡಳಿತಾಧಿಕಾರಿ ಶೋಭಾ ಯು.ಪಿ.ಯವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here