Site icon Suddi Belthangady

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ(ಅಕ್ರಮ ಸಕ್ರಮ) ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ, ಸದಸ್ಯರ ಅಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.

ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಸದಸ್ಯರಾಗಿ ತಣ್ಣೀರುಪಂಥ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಮಾಜಿ ಅಧ್ಯಕ್ಷ ಪ್ರಸ್ತುತ ಗ್ರಾಮ ಪಂಚಾಯತ್ ಸದಸ್ಯರಾದ ಆಯುಬ್ ಡಿ.ಕೆ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ, ಸಾಮಾಜಿಕ ಕಾರ್ಯಕರ್ತೆ ವಿನುತಾ ರಜತ್ ಗೌಡ ಮತ್ತು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ತಾಲೂಕು ಸಮಿತಿಯ ಖಜಂಜಿ, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಧರ್ ಎಸ್ ಇವರನ್ನು ಅಯ್ಕೆ ಮಾಡಿ ಸರ್ಕಾರ ಆದೇಶ ಮಾಡಿದೆ.

Exit mobile version