ಗುರುವಾಯನಕೆರೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಪುರಂದರ ಶೆಟ್ಟಿ ರವರಿಗೆ ಸನ್ಮಾನ

0

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ(ನಿ) ಗುರುವಾಯನಕೆರೆಯ ನಿರ್ದೇಶಕರಾಗಿದ್ದ ಪುರಂದರ ಶೆಟ್ಟಿಯವರು ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇವರಿಗೆ ಗುರುವಾಯನಕೆರೆ ವಿಜಯ ಕ್ರೆಡಿಟ್ ಸೊಸೈಟಿಯಲ್ಲಿ ಜ.2ರಂದು ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಂ.ಜಿ.ಶೆಟ್ಟಿ ಉಜಿರೆ, ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ ಕುಂಟಿನಿ, ರಘುರಾಮ ಶೆಟ್ಟಿ, ನಾರಾಯಣ ಶೆಟ್ಟಿ, ಬಾಲಕೃಷ್ಣ ಪುಂಜ, ಜಯರಾಮ ಭಂಡಾರಿ, ಕೃಷ್ಣ ರೈ, ಮಂಜುನಾಥ ರೈ, ಅಂಬಾ.ಬಿ ಆಳ್ವ ಮತ್ತು ಸಾರಿಕಾ.ಡಿ.ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here