ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಸಿರಿ ಕಬ್ಲ್ ನ‌ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಸಿಬ್ಬಂದಿಗಳ ಜನವರಿ ತಿಂಗಳ ಹುಟ್ಟುಹಬ್ಬ ಆಚರಣೆ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ 2024ರ ಹೊಸ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಿರಿ ಸಿಬ್ಬಂದಿಗಳ ಜನವರಿ ತಿಂಗಳ ಹುಟ್ಟು ಹಬ್ಬ ಆಚರಣೆ ಹಾಗೂ ಸಿರಿ ಕಬ್ಲ್ ನ‌ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ‌.2 ರಂದು ಕಚೇರಿಯಲ್ಲಿ ನಡೆಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ಅಧ್ಯಕ್ಷತೆ ವಹಿಸಿದ್ದರು.ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಉದ್ಯಮಿ ಲಕ್ಷ್ಮೀ ಇಂಡಸ್ಟ್ರೀಸ್ ನ ಮೋಹನ್ ಕುಮಾರ್, ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ರಾಜೇಶ್ ಪೈ ಹಾಗೂ ಸಿರಿ ಕಬ್ಲ್ ನ ಅಧ್ಯಕ್ಷೆ ಭವಾನಿ ಶಂಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕ ಪ್ರಸನ್ನ ಸ್ವಾಗತಿಸಿದರು.ಸತೀಶ್ ವಂದಿಸಿದರು.ಜೀವನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here