Site icon Suddi Belthangady

ಗೇರುಕಟ್ಟೆ: ಜನತಾ ಕಾಲೋನಿ ನಿವಾಸಿ ಮುಸ್ತಫಾ ಹೃದಯಾಘಾತದಿಂದ ನಿಧನ

ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ, ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (26 ವ) ಜ.4ರಂದು ಹೃದಯಾಘಾತದಿಂದ ಮೃತಪಟ್ಟರು.

ನಿನ್ನೆ ರಾತ್ರಿ ತನಕ ಗೇರುಕಟ್ಟೆ ಪಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದರು.ಬೆಳಿಗ್ಗೆ ತಡವಾದರೂ, ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ.ಮನೆಯವರು ಬಂದು ನೋಡಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಾಗ ಹೃದಯಾಘಾತದಿಂದ ನಿಧನರಾಗಿರುವುದು ತಿಳಿಯಿತು.

Exit mobile version