ದ್ವಿಚಕ್ರ ವಾಹನಗಳ ನಡುವೆ ಅಪಘಾತ

0

ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ ದೂರಿನಂತೆ ಜ.3 ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಅವರು ತಮ್ಮ ಕೆಎ11ಇಎಂ3952 ನೇ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ, ಅವರ ವಿರುದ್ದ ದಿಕ್ಕಿನಿಂದ ಕೆಎ70ಇ9961ನೇ ದ್ವಿಚಕ್ರ ವಾಹನವನ್ನು ಅದರ ಸವಾರಳಾದ ಸ್ವಾತಿ(26ವ) ಎಂಬವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ರಂಜಿತ್ ರ ಮೋಟಾರು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ದ್ವಿಚಕ್ರ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗಳಾಗಿರುತ್ತದೆ.ಗಾಯಾಳುಗಳು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 03/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here