ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

0

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಸಂದರ್ಭಕ್ಕೆ ಸರಿಯಾಗಿ ಸೂಕ್ತವಾದ ಮಾಹಿತಿಗಳನ್ನು ಒದಗಿಸುವುದರಿಂದ ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಸಾಧ್ಯವಿದೆ ಎಂದು ದ.ಕ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರಗಿದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ವಿಜ್ಞಾನ ವಿಭಾಗದ ಉಪನ್ಯಾಸಕರಿಗೆ ಹಮ್ಮಿಕೊಂಡ ಸಿಇಟಿ ವಿದ್ಯಾರ್ಥಿ ಮಿತ್ರ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಪ್ರತಿಭಾವಂತ ವಿದ್ಯಾರ್ಥಿಗಳು ಸಣ್ಣ ಪುಟ್ಟ ತಪ್ಪುಗಳಿಂದ ಅವಕಾಶ ವಂಚಿತರಾಗದಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ.

ಸೂಕ್ತವಾದ ಮಾಹಿತಿಯನ್ನು ಆಸಕ್ತ ವಿದ್ಯಾರ್ಥಿಗಳಿಗೆ ಒದಗಿಸಿಕೊಟ್ಟು ಅವರು ಗುರಿ ತಲುಪಲು ಪ್ರೇರಣೆಯನ್ನು ನೀಡಬೇಕು. ಉಪನ್ಯಾಸಕರು ಈ ಬಗ್ಗೆ ಹೆಚ್ಚು ತಿಳಿದುಕೊಂಡಿರಬೇಕು ಎಂದರು. ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ ಕಾರ್ಯಗಾರವನ್ನು ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು. ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಗಾರವನ್ನು ನಡೆಸಿಕೊಟ್ಟರು. ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು.

ಉಪನ್ಯಾಸಕರಾದ ಹರ್ಷಿತ್ ಕುಮಾರ್ ಧನ್ಯವಾದವಿತ್ತರು. ಉಪನ್ಯಾಸಕಿ ಪ್ರಜ್ವಲಾ ಎಸ್.ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here