Site icon Suddi Belthangady

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ- ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಜ.7ರಂದು ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ವರದಿಗಾರ ಚೈತ್ರೇಶ್ ಇಳಂತಿಲ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಪ್ರಜಾವಾಣಿ ಪತ್ರಿಕೆಯ ವರದಿಗಾರ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಆರ್.ಎನ್.ಪೂವಣಿ ನಿರ್ವಹಿಸಿದರು.ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಏಣಿಂಜೆ ವರದಿ ವಾಚಿಸಿ, ಕೋಶಾಧಿಕಾರಿ ತುಕಾರಾಮ ಬಿ. ಲೆಕ್ಕಪತ್ರ ಮಂಡಿಸಿದರು.ಜಿಲ್ಲಾ ಕಾರ್ಯದರ್ಶಿ ಭುವನೇಶ್ ಜಿಲ್ಲಾ ಕಾರ್ಯಕ್ರಮದ ವಿವರ ನೀಡಿ, ನೂತನ ಜತೆ ಕಾರ್ಯದರ್ಶಿ ಮನೋಹರ್ ವಂದಿಸಿದರು.

Exit mobile version