ಶಾಸಕರ ನೇತೃತ್ವದಲ್ಲಿ ಮಂತ್ರಾಕ್ಷತೆ ವಿತರಣೆ

0

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮ ಪ್ರಾಣ ಪ್ರತಿಷ್ಠೆ ಹಾಗೂ ಭವ್ಯ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಮಂತ್ರಾಕ್ಷತೆಯನ್ನು ಗರ್ಡಾಡಿ ಗ್ರಾಮದಲ್ಲಿ ವಿತರಿಸುವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜ.7ರಂದು ಜರಗಿತು.

ಶ್ರೀ ನಂದಿಬೆಟ್ಟ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಲಾಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಉದಯ ಮಂಜಿತ್ತಾಯ, ಮುಖಂಡ ವಸಂತ ಪೂಜಾರಿ ಹಾಗೂ ಭಕ್ತರು ಉಪಸ್ಥಿತರಿದ್ದರು.

ಚೆಂಡೆವಾದನ, ಭಜನೆ ಇತ್ಯಾದಿಗಳೊಂದಿಗೆ ಮಂತ್ರಾಕ್ಷತೆಯನ್ನು ಗ್ರಾಮದ ಮನೆಗಳಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here