Site icon Suddi Belthangady

ಗಮಕ ಸಮ್ಮೇಳನ- ಡಾ.ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

ಧರ್ಮಸ್ಥಳ: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಜ.20ರಂದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಲಿರುವ ತಾಲೂಕು ಗಮಕ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿದರು.ಬಳಿಕ ಮಾತನಾಡುತ್ತಾ ಗಮಕ ಚಟುವಟಿಕೆಗಳು ತಾಲೂಕಿನಲ್ಲಿ ನಿರಂತರವಾಗಿ ನಡೆಯಲಿ ಎಂದು ಆಶಿಸುತ್ತಾ ಸಮ್ಮೇಳನವು ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ, ಸಮ್ಮೇಳನದ ಸರ್ವಾಧ್ಯಕ್ಷ ಜಯರಾಮ ಕುದ್ರೆತ್ತಾಯ, ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ, ಸಮ್ಮೇಳನದ ಸಂಯೋಜಕ ರಾಮಕೃಷ್ಣ ಭಟ್ ಬೆಳಾಲು, ಬೆಳಾಲು ಪ್ರೌಢಶಾಲೆಯ ಪೋಷಕ ಸಂಘದ ಅಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ಕನಿಕ್ಕಿಲ ಮತ್ತು ಧನುಷ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆ ಮತ್ತು ಡಿ.ಹರ್ಷೇಂದ್ರ ಕುಮಾರ್ ರವರಿಗೆ ಆಮಂತ್ರಣ ನೀಡಿ ಅವರಿಂದ ಸಮ್ಮೇಳನದ ಯಶಸ್ಸಿಗೆ ಮಾರ್ಗದರ್ಶನವನ್ನು ಪಡೆಯಲಾಯಿತು.

Exit mobile version