ಮಡಂತ್ಯಾರು: ಸತ್ಯನಾರಾಯಣ ಪೂಜೆ, ಪದಗ್ರಹಣ ಕಾರ್ಯಕ್ರಮ

0

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಮಡಂತ್ಯಾರು, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಪಾರೆಂಕಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಾರೆಂಕಿ, ಎಬಿಸಿ ಜನಜಾಗೃತಿ ಗ್ರಾಮ ಸಮಿತಿ ಪಾರೆಂಕಿ ಮತ್ತು ವಿಪತ್ತು ಶೌರ್ಯ ಘಟಕ ಮಡಂತ್ಯಾರು ಇದರ ಸoಯುಕ್ತ ಆಶ್ರಯದಲ್ಲಿ ಪಾರೆಂಕಿ ಮಹಿಷವರ್ಧಿನಿ ದೇವಸ್ಥಾನದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತ್ಯ ನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಾಮನ ಪೂಜಾರಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಛೇರಿ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ವಲಯ ಒಕ್ಕೂಟದ ಅಧ್ಯಕ್ಷ ಸತೀಶ್ ಆಚಾರ್ಯ ಮತ್ತು ಪಾರೆಂಕಿ ಎಬಿಸಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ವಲಯ ಮೇಲ್ವಿಚಾರಕ ವಸಂತ ಕುಮಾರ್, ಸ್ವಾಗತವನ್ನು ಪಾರೆಂಕಿ ಬಿ ಒಕ್ಕೂಟದ ಸೇವಾಪ್ರತಿನಿಧಿ ಹರಿಣಾಕ್ಷಿ, ವರದಿಯನ್ನು ಪಾರೆಂಕಿ ಎ ಒಕ್ಕೂಟದ ಸೇವಾಪ್ರತಿನಿಧಿ ಶೋಭಾಶ್ರೀ ಮಂಡನೆ ಮಾಡಿದರು.ಪಾರೆಂಕಿ ಸಿ ಒಕ್ಕೂಟದ ಸೇವಾಪ್ರತಿನಿಧಿ ಲೀಲಾವತಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here