ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಮಾಲೋಚನಾ ಸಭೆ ಜ.9 ರಂದು ಮಂಗಳೂರಿನಲ್ಲಿ ನಡೆಯಿತು.

ಫೆ.25 ರಿಂದ 28ರ ವರೆಗೆ ನಡೆಯುವ ಜಾತ್ರಾ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕೆಂದು ತೀರ್ಮಾನಿಸಲಾಯಿತು.

ಇದೇ ಸಮಯದಲ್ಲಿ ಶೈಲೇಂದ್ರ ಸುವರ್ಣ ರವರನ್ನು ಜಾತ್ರೋತ್ಸವದ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಕಂಕನಾಡಿ ಗರಡಿಯ ಮುಖ್ಯಸ್ಥ ಕೆ.ಚಿತ್ತರಂಜನ್ ಕಂಕನಾಡಿ. ಆಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್,ಎಸ್.ಆರ್.ಶೈಲೇಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಪೂಜಾರಿ ಬಳೆಂಜ, ಎಂ.ಜಯಾನಂದ ಪೂಜಾರಿ, ಸಂತೋಷ್ ಪೂಜಾರಿ ಉಗ್ಗೇಲ್ ಬೆಟ್ಟು, ಶುಭ ರಾಜೇಂದ್ರ ಪೂಜಾರಿ, ಜಯರಾಮ ಪೂಜಾರಿ ಸುಳ್ಯ, ಜಯರಾಮ್ ಬಂಗೇರ ಬೆಳ್ತಂಗಡಿ, ವಿದ್ಯಾ ರಾಕೇಶ್, ಶೇಖರ್ ಅಮೀನ್ ಮರೋಲಿ, ಹರೀಶ ಸನಿಲ್, ಮಂಗಳೂರು ಪೃಥ್ವಿರಾಜ್ ಎಂ.ಕಂಕನಾಡಿ, ವಿಶ್ವನಾಥ್ ಕುಂದರ್ ಶಕ್ತಿನಗರ, ಕುಸುಮಾಕರ್ ಕುಂಪಲ,ಮೊದಲಾದ ಗಣ್ಯರು ಹಾಜರಿದ್ದರು.

ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ, ದೀಪಕ್ ಕೋಟ್ಯಾನ್ ವಂದಿಸಿದರು.

LEAVE A REPLY

Please enter your comment!
Please enter your name here