Site icon Suddi Belthangady

ಧರ್ಮಸ್ಥಳ: ಮುಳಿಕ್ಕಾರಿನಲ್ಲಿ ಕಾಡಾನೆ ದಾಳಿ- ಕೃಷಿ ನಾಶ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನಲ್ಲಿ ಒಂಟಿ ಸಲಗವೊಂದು ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟು ಮಾಡಿದೆ.

ಬುಧವಾರ ಬೆಳಗ್ಗಿನ ಜಾವ ಮುಳಿಕಾರು ನಿವಾಸಿ ಡೀಕಯ್ಯ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆ ಒಂದು ದೊಡ್ಡ ತೆಂಗಿನ ಮರವನ್ನು ನೆಲಕ್ಕುರುಳಿಸಿ ಪುಡಿಗೈದಿದೆ.ಅಲ್ಲದೆ ತೆಂಗಿನ ಮರ, ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಉಂಟುಮಾಡಿದೆ.ಕಳೆದ ಕೆಲದಿನಗಳಿಂದ ಒಂಟಿ ಸಲಗ ಇದೇ ಪರಿಸರದ ಅರಣ್ಯದಲ್ಲಿ ತಿರುಗಾಟ ನಡೆಸುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

ಆನೆ ಮುಳಿಕ್ಕಾರಿನ ಅರಣ್ಯದಲ್ಲಿಯೇ ಇದ್ದು ರಾತ್ರಿ ಮತ್ತೆ ಕೃಷಿ ಭೂಮಿಗೆ ನುಗ್ಗುವ ಅಪಾಯವಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.ಕಳೆದ ಕೆಲದಿನಗಳಿಂದ ಈ ಪರಿಸರದಲ್ಲಿ ಕಾಡಾನೆಗಳ ಉಪಟಳ ಒಂದಿಷ್ಟು ಕಡಿಮೆಯಾಗಿತ್ತು.ಇದೀಗ ಮತ್ತೆ ಒಂಟಿಸಲಗ ತಿರುಗಾಟ ಆರಂಭಿಸಿದೆ.ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಜನರು ಒತ್ತಾಯಿಸುತ್ತಿದ್ದಾರೆ.

Exit mobile version