ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ಪೂರ್ವಭಾವಿ ಸಭೆ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಸುಭಾಷ್ ಚಂದ್ರ ಬೋಸ್ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಜ.10ರಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.

ಈ ಕ್ರೀಡಾಕೂಟವನ್ನು ಫೆ.3ರಂದು ನಡೆಸುವುದೆಂದು ನಿರ್ಧರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಕೃಷ್ಣಾನಂದ ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಸ್ವಾಗತಿಸಿದರು, ಸಂಘದ ಕಾರ್ಯದರ್ಶಿ ನಿರಂಜನ್ ಧನ್ಯವಾದ ನೀಡಿದರು, ಅಜಿತ್ ಕುಮಾರ್ ಕೊಕ್ರಾಡಿವರು ಕಾರ್ಯಕ್ರಮವನ್ನು ನಿರೂಪಿಸಿದರು.ಗ್ರೇಡ್ ಟು ದೈಹಿಕ ಶಿಕ್ಷಣ ಸಂಘದ ಜಿಲ್ಲಾ ಅಧ್ಯಕ್ಷ ರವಿರಾಜ್ ಗೌಡ ಉಪಸ್ಥಿತರಿದ್ದರು.

ತಾಲೂಕು ಗ್ರೇಟ್ ಟು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಅಖಿಲ್ ಕುಮಾರ್ ಉಪಸ್ಥಿತರಿದ್ದರು.ಪ್ರಭಾರ ತಾಲೂಕು ದೈಹಿಕ ಶಿಕ್ಷಣ ಪ್ರವೀರೀಕ್ಷಣಾಧಿಕಾರಿ ಸುಜಯ ಅವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here