Site icon Suddi Belthangady

ಫೆ.3: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಕಸಿತ್ ಭಾರತ್ @2047- ಸಮಸ್ಯೆಗಳು ಮತ್ತು ಭವಿಷ್ಯ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ಧಿ ವಿಭಾಗಗಳ ವತಿಯಿಂದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಹಯೋಗದಲ್ಲಿ ‘ವಿಕಸಿತ್ ಭಾರತ್ @2047: ಸಮಸ್ಯೆಗಳು ಮತ್ತು ಭವಿಷ್ಯ’ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಫೆ.3 ರಂದು ನಡೆಯಲಿದೆ.

ರಾಜ್ಯ, ರಾಷ್ಟ್ರ ಮಟ್ಟದ ಶಿಕ್ಷಣ ತಜ್ಞರು ಹಾಗೂ ಆರ್ಥಿಕ ತಜ್ಞರು ವಿಚಾರ ಮಂಡನೆ ಮಾಡಲಿದ್ದು, ಸಂಶೋಧನೆ ಆಧಾರಿತ ಬರಹಗಳ ಮಂಡನೆಗೂ ಅವಕಾಶವಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Exit mobile version