ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನಿಂದ ಸ್ವಾಮಿ ವಿವೇಕಾನಂದ ಜಯಂತಿ

0

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನಲ್ಲಿ ಜ.12ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ನ ಅಧ್ಯಕ್ಷ ಎಂ.ಎಂ.ದಯಾಕರ್ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ದಂತ ವೈದ್ಯ ಪ್ರಶಾಂತ್ ಮಾತನಾಡಿ ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳು ಯುವ ಜನಾಂಗಕ್ಕೆ ಮಾದರಿ ಎಂದು ಹೇಳಿದರು.

ಟ್ರಸ್ಟ್ ನ ಕಾರ್ಯದರ್ಶಿ ವಕೀಲ ಸುಬ್ರಹ್ಮಣ್ಯ ಅಗರ್ಥ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಚಿಂತನೆಗಳನ್ನು ತಿಳಿಸಿದರು.

ಟ್ರಸ್ಟಿ ನವೀನ್ ನೆರಿಯಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವ್ಯವಸ್ಥಾಪಕ ಶ್ರೀಶ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ನ್ಯಾಯವಾದಿ ಉಮೇಶ್ ವಂದಿಸಿದರು.

LEAVE A REPLY

Please enter your comment!
Please enter your name here