ಹೊಸಂಗಡಿ: ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

0

ವೇಣೂರು: ಕರ್ನಾಟಕ ಸರಕಾರ ಸಮಾಜ ಕಲ್ಯಾಣ ಇಲಾಖೆ, ವಸತಿ ಶಾಲೆಗಳ ಸಂಘ ಬೆಂಗಳೂರು ಮತ್ತು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಹೊಸಂಗಡಿ ಇಂದಿರಾ ಗಾಂಧಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.

ದ.ಕ. ಸ್ಕೇಡ್ಸ್ ನಿರ್ದೇಶಕ, ಪ್ರಗತಿಪರ ಕೃಷಿಕ ಅನುಗ್ರಹ ಫಾರ್ಮ್ ಎನ್.ಸೀತಾರಾಮ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ವಹಿಸಿದ್ದರು.

ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಿನ್ಸಿಪಾಲ್ ಶ್ರೀಧರ್ ಶೆಟ್ಟಿ ಸ್ವಾಗತಿಸಿದರು. ಅಧ್ಯಾಪಕಿ ವಿದ್ಯಾಲತಾ ಪ್ರಾಸ್ತಾವಿಕವಾಗಿ ಮಾತಾಡಿದರು.

ಅಥಿತಿಗಳಾಗಿ ಜಯಂತ್ ಶೆಟ್ಟಿ ಆರಂಬೋಡಿ, ವಿದ್ಯಾರ್ಥಿ ಪೋಷಕ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ, ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ.ಪೆರಿಂಜೆ, ಸಮಾಜ ಸೇವಕ ವಿಠ್ಠಲ್ ಅಂಗರಕರಿಯ ಉಪಸ್ಥಿತರಿದ್ದು ಶುಭ ಕೋರಿದರು.

ಸುಧೀರ್ ಕಾರ್ಯಕ್ರಮ ಸಂಯೋಜನೆ ಮಾಡಿದರು.ರಾಜ್ಯದ ವಿವಿಧ ಕಡೆಗಳಿಂದ ವಿದ್ಯಾರ್ಥಿ ಪೋಷಕರು ಆಗಮಿಸಿದ್ದರು.

LEAVE A REPLY

Please enter your comment!
Please enter your name here