Site icon Suddi Belthangady

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.13ರಂದು ಸಂಘದ ಸಭಾ ಭವನದಲ್ಲಿ ಜರಗಿತು.

ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವರದಿ ವಾಚಿಸಿದರು.ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಜಮಾ ಖರ್ಚು ಮಂಡಿಸಿದರು.

ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಜತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್, ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳುಗಳಾದ ವಸಂತ ಸಾಲಿಯಾನ್, ಪಿ.ಕೆ.ರಾಜು ಪೂಜಾರಿ, ಪೀತಾಂಬರ ಹೇರಾಜೆ, ಯೋಗೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಸೋಮನಾಥ ಬಂಗೇರ, ಮಾಜಿ ನಿರ್ದೇಶಕರುಗಳು, ಸದಸ್ಯರು ಹಾಜರಿದ್ದರು.

ಸಭೆಯಲ್ಲಿ ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಗೌರವ ಅಧ್ಯಕ್ಷ ಕೆ.ವಸಂತ ಬಂಗೇರ ವಿತರಿಸಿದರು.

ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Exit mobile version