Site icon Suddi Belthangady

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ, ಸಭಾಭವನ ಉದ್ಘಾಟನೆ

ಕಡಿರುದ್ಯಾವರ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.13 ರಂದು ಕಡಿರುದ್ಯಾವರ ಶಾಖಾ ವಠಾರದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಿದರು.ಸಭಾ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಂಗಳೂರು ನಬಾರ್ಡ್ ಸಹಾಯಕ ಮಹಾಪ್ರಬಂಧಕಿ ಸಂಗೀತಾ ಕರ್ತಾ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ, ಕಡಿರುದ್ಯಾವರ ಗ್ರಾ.ಪಂ.ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ವಿನಯಚಂದ್ರ ಗೌಡ ವಿ., ಕಡಿರುದ್ಯಾವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ ಗೌಡ, ಕಡಿರುದ್ಯಾವರ ಉದ್ಧಾರ (ಕಟ್ಟಡ ನಿರ್ಮಿಸಲು ನಿವೇಶನ ನೀಡಿದವರು) ನಿವೃತ್ತ ಶಿಕ್ಷಕ ಜನಾರ್ದನ ಗೌಡ, ಕಡಿರುದ್ಯಾವರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್, ಹರೀಶ್ ಪೂಂಜ, ತಾರಾನಾಥ್, ಜನಾರ್ದನ ಗೌಡ, ಭರತೇಶ್, ಆದಂರವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಸಂತ ಗೌಡ.ಕೆ, ನಿರ್ದೇಶಕರುಗಳಾದ ಲಕ್ಷ್ಮಣ ಗೌಡ ಎನ್, ಉಮೇಶ್ ಎ.ಬಿ, ತನುಜಾ ಶೇಖರ್, ಆನಂದ ಗೌಡ ಬಿ., ರಮೇಶ ಕೆಂಗಾಜೆ, ವಿನಯಚಂದ್ರ, ವಿಜಯ, ರಘುನಾಥ, ಸತೀಶ ನಾಯ್ಕ, ಭವ್ಯ, ಸಂದೇಶ್ ಕುಮಾ‌ರ್, ಎಂ.ಡಿ.ಸಿ.ಸಿ ಬ್ಯಾಂಕಿನ ಪ್ರತಿನಿಧಿ ಹಾಗೂ ವೃತ್ತಿಪರ ನಿರ್ದೇಶಕರಾದ ಪುಷ್ಪಲತಾ, ಕೇಶವ ಎಂ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾ‌ರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೇಮಾವತಿ, ಯಶೋಧ ಪ್ರಾರ್ಥಿಸಿ, ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ಸ್ವಾಗತಿಸಿದರು.ಜನಾರ್ದನ ನಿರೂಪಿಸಿದರು.

Exit mobile version