ಉಜಿರೆಯಲ್ಲಿ ಎಸ್‌ವೈಎಸ್ 30ನೇ ವಾರ್ಷಿಕ ಪ್ರಚಾರಾರ್ಥ ಸಂಘಟನಾ ಪ್ರಮುಖರ ಸಮಾವೇಶ

0

ಬೆಳ್ತಂಗಡಿ: ಎಸ್‌ವೈಎಸ್ ಕರ್ನಾಟಕ ರಾಜ್ಯ ಸಮಿತಿಯ 30ನೇ ವಾರ್ಷಿಕ ಸಮ್ಮೇಳನದ ಪ್ರಚಾರಾರ್ಥ ಬೆಳ್ತಂಗಡಿ ಝೋನ್ ನಡೆಸಿದ ಎನರ್ಜೈಝ್-2K24 ಸುನ್ನೀ ಸಂಘ ಕುಟುಂಬದ ಸಮ್ಮಿಲನ ಕಾರ್ಯಕ್ರಮ ಜ.12ರಂದು ಉಜಿರೆ ಮಲ್ಜ‌ಅ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಎಂ.ಎ ಕಾಸಿಂ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಉದ್ಘಾಟನೆ ನೆರವೇರಿಸಿದರು.ಮುಹಮ್ಮದಲಿ ಸಖಾಫಿ ವೆಲ್ಲಿಯಾಡ್ ಕೇರಳ ಮುಖ್ಯಪ್ರಭಾಷಣ ನಡೆಸಿದರು.

ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ, ವಾದಿ ಇರ್ಫಾನ್ ಸಂಸ್ಥೆಯ ಸಾರಥಿ ಫಝಲ್ ಜಮಲುಲ್ಲೈಲಿ ತಂಙಳ್ ಪ್ರಾಸ್ತಾವಿಕ ಭಾಷಣ ಮಾಡಿದರು.

ಎಸ್‌ವೈಎಸ್ ರಾಜ್ಯ ಸಮಿತಿ ಪಬ್ಲಿಸಿಟಿ ಕನ್ವೀನರ್ ಮುಹಮ್ಮದಲಿ ಸಖಾಫಿ ಸುರಿಬೈಲ್ 30ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ ಭಾಷಣ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಆದಂ ಅಹ್ಸನಿ, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂಬಿಎಂ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಎಸ್‌.ಎಂ ಕೋಯ ತಂಙಳ್, ಎಸ್‌ವೈಎಸ್ ರಾಜ್ಯ ಸಮಿತಿ ನಾಯಕರಾದ ಹಂಝ ಮದನಿ ಗುರುವಾಯನಕೆರೆ, ಜಂಇಯ್ಯತುಲ್ ಮುಫತ್ತಿಷ್ ರಾಜ್ಯಾಧ್ಯಕ್ಷ ಹಾಫಿಳ್ ಹನೀಫ್ ಮಿಸ್ಬಾಹಿ, ಎಸ್.ಎಂ.ಎ ಉಜಿರೆ ಝೋನಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಂಡಾಜೆ, ಸ್ವಾಗತ ಸಮಿತಿ ಚೆಯರ್‌ಮೇನ್ ಸಲೀಂ ಕನ್ಯಾಡಿ, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಕೋಶಾಧಿಕಾರಿ ಹಾರಿಸ್ ಕುಕ್ಕುಡಿ, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಶರೀಫ್ ಬೆರ್ಕಳ, ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಮಾಚಾರು, ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು ಹಾಗೂ ಸುನ್ನೀ ಜಂಇಯ್ಯತುಲ್ ಉಲಮಾ, ಕರ್ನಾಟಕ, ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ,ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್, ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್, ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನಾಯಕರು ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಕನ್ವೀನರ್ ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here