Site icon Suddi Belthangady

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ, ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

ಗುರುವಾಯನಕೆರೆ: ಇಲ್ಲಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಇದರ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾನದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ ಜ.12 ರಂದು ಶ್ರೀ ವೇದಮೂರ್ತಿ ಶ್ರೀನಿವಾಸ್ ಅಮ್ಮುಣ್ಣಯ್ಯ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನ‌ರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಸಂಪತ್.ಬಿ.ಸುವರ್ಣ, ಗೌರವಾಧ್ಯಕ್ಷ ಮನೋಜ್ ಕುಮಾರ್ ನೆಕ್ಕಿಲೋಟ್ಟು, ಕಾರ್ಯಾಧ್ಯಕ್ಷ ವಿಶ್ವೇಶ್ ಕಿಣಿ, ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷ ವೆಂಕಟರಮಣ ಆಚಾರ್ಯ, ಅಜಿತ್ ಮೋಹನ್ ಶಿವಾಜಿನಗರ, ಸಮಿತಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Exit mobile version