ಬದ್ಯಾರಿನಲ್ಲಿ ದಿ|ಬಿ.ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

0

ತೆಂಕಕಾರಂದೂರು: ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ। ಬಿ.ಲಕ್ಕಣ್ಣ ಶೆಟ್ಟಿ ಸ್ಮಾರಕವಾಗಿ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮವು ಜ.14ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ ಶಾಸಕ ಕೆ.ಪ್ರತಾಪ್ ಸಿಂಹ ನಾಯಕ್‌, ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಪೂರ್ವಾಧ್ಯಕ್ಷ ಲ। ಎಂ.ಜಿ ಶೆಟ್ಟಿ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಲ। ಉಮೇಶ್‌ ಶೆಟ್ಟಿ, ಲಯನ್ ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್ ತಾವುರೊ ಉಪಸ್ಥಿತರಿದ್ದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನವೀನ್ ಕೆ.ಸಾಮಾನಿ, ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂತೋಷ್‌ ಹೆಗ್ಡೆ ಕಟ್ಟೆ, ಸತೀಶ್ ಹೆಗ್ಡೆ ಕಟ್ಟೆ, ಡಾ.ಶಶಿಧರ ಡೋಂಗ್ರೆ, ಸುರೇಶ್ ಶೆಟ್ಟಿ ಲಾಯಿಲ, ಹೇಮಶಂಕ‌ರ್ ಶೆಟ್ಟಿ ಬೆಳ್ತಂಗಡಿ, ಪುಷ್ಪರಾಜ್‌ ಶೆಟ್ಟಿ ಬೆಳ್ತಂಗಡಿ, ವಸಂತ ಶೆಟ್ಟಿ, ರಾಜು ಶೆಟ್ಟಿ ಬೆಂಗೆತ್ಯಾರು, ಉದಯ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ನೇಸರ ಹಾಗೂ ಇತರರು ಉಪಸ್ಥಿತರಿದ್ದರು.ಶ್ರೀಮತಿ ಮತ್ತು ದೇವದಾಸ್‌ ಶೆಟ್ಟಿ ಆಗಮಿಸಿದ ಆತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಶಿಕ್ಷಕ ಧರಣೇಂದ್ರ ಜೈನ್‌ ಕಾರ್ಯಕ್ರಮ ನಿರೂಪಿಸಿದರು.ಲ| ಉಮೇಶ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here