ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

0

ಬೆಳ್ತಂಗಡಿ: ಕೆ.ವಸಂತ ಬಂಗೇರ ಅಭಿಮಾನಿ ಬಳಗ, ಬೆಳ್ತಂಗಡಿ, ಶ್ರೀ ಗುರುದೇವ ವಿದ್ಯಾಸಂಸ್ಥೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ, ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನಾ ಸಮಾರಂಭ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾಭವನದಲ್ಲಿ ಜ.15ರಂದು ನಡೆಯಿತು.

ಕೆ.ವಸಂತ ಬಂಗೇರ ಅಭಿಮಾನಿ ಬಳಗದ ಅಧ್ಯಕ್ಷ ಈಶ್ವರ ಭಟ್ ಮಾಯಿಲತೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಶೈಕ್ಷಣಿಕ ನೆರವು ನೀಡಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಅಳದಂಗಡಿ ಸುವರ್ಣ ಕ್ಲಿನಿಕ್ ಡಾ.ಹರಿಪ್ರಸಾದ್, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ನಿಯೋಜಿತ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬಂಗೇರರ ಸಹೋದರ ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ನಿಯೋಜಿತ ಅಧ್ಯಕ್ಷೆ ಸುಮತಿ ಪ್ರಮೋದ್, ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್.ಕೋಟ್ಯಾನ್, ನಿಯೋಜಿತ ಅಧ್ಯಕ್ಷ ಪ್ರಸಾದ್ ಎಂ.ಕೆ., ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಭಗೀರಥ ಜಿ., ನಿಯೋಜಿತ ಉಪಾಧ್ಯಕ್ಷ ಸುಂದರ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ಧರಣೇಂದ್ರ ಕುಮಾರ್, ಶೇಖರ ಕುಕ್ಕೆಡಿ, ನಮಿತಾ ತೋಟತ್ತಾಡಿ, ಮಂಗಳೂರು ವೆನಲಾಕ್ ಆಸ್ಪತ್ರೆಯ ಡಾ.ದಿಶಾ, ಮೆಡಿಕಲ್ ಸಂಯೋಜಕ ಅಂತೋನಿ ಡಿ’ಸೋಜ, ಅಭಿಮಾನಿ ಬಳಗದ ಉಪಾಧ್ಯಕ್ಷ ಲೋಕೇಶ್ ಗೌಡ ಪಾಂಬೆಲು, ಗುರುದೇವ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಸವಿತಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್, ಉಪ ಪ್ರಾಂಶುಪಾಲ ಶಮಿಯುಲ್ಲಾ, ರಾಜಶೇಖರ್ ಶೆಟ್ಟಿ ಮಡಂತ್ಯಾರು, ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ವರ್ಮಾ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಅಕ್ರಮ ಸಮಿತಿ ಸದಸ್ಯ ಅಯೂಬ್ ಡಿ.ಕೆ. ತಣ್ಣೀರುಪಂತ, ಲಕ್ಷ್ಮಣ ಗೌಡ ಬಂಗಾಡಿ, ಆದಿತ್ಯ ನಾರಾಯಣ ಕೊಲ್ಲಾಜೆ, ನ್ಯಾಯವಾದಿ ಮನೋಹರ ಇಳಂತಿಲ ಬಂಗೇರರ ಅಭಿಮಾನಿಗಳು, ಗುರುದೇವ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here