Site icon Suddi Belthangady

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪೆ.12 ರಂದು ಜರಗಲಿರುವ ಜಾತ್ರೆಯ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆಯು ಜ.14ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.

ಅಧ್ಯಕ್ಷರಾಗಿ ನಂದನ್ ಕುಮಾರ್, ಉಪಾಧ್ಯಕ್ಷರಾಗಿ ಕಿರಣ್ ಕುಮಾರ್, ಜ್ಯೋತಿಕಾ ಸ್ಟುಡಿಯೋ, ಕಾರ್ಯದರ್ಶಿಯಾಗಿ ಗೇತನ್ ಮಡಿವಾಳ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಬೈರೊಡ್ಚಿ, ಕೋಶಾಧಿಕಾರಿಯಾಗಿ ಪ್ರಮೋದ್ ಇಂದ್ರಪ್ರಸ್ಥ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಎಚ್.ಎಲ್.ರಾವ್ ಅನುವಂಶೀಯ ಆಡಳಿತ ಮೊಕ್ತೇಸರರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಸುಲ್ಕೇರಿಮೊಗ್ರು, ಶ್ರೀ ಸೋಮನಾಥ ಬಂಗೇರ ವರ್ಪಾಳೆ, ಜಗನ್ನಾಥ ವರ್ಪಾಳೆ, ಹರಿ ಭಟ್ ಅರ್ಚಕರು, ರಾಜೇಂದ್ರ ಸಾಲಿಯಾನ್ ನಿಕಟ ಪೂರ್ವ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ, ಸಂಜೀವ ದೇವರಗುಡ್ಡೆ ನಿಕಟ ಪೂರ್ವ ಕಾರ್ಯದರ್ಶಿ ಹಾಗೂ ಊರವರು ಉಪಸ್ಥಿತರಿದ್ದರು.

Exit mobile version