ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ಮಂಗಳೋತ್ಸವ, ಹಸಿರುವಾಣಿ ಸಮರ್ಪಣೆ

0

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ಷರ ದೇವಸ್ಥಾನದಲ್ಲಿ ಅಷ್ಟಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಳೋತ್ಸವ ಹಾಗೂ ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮ ಜ.14 ರಂದು ನಡೆಯಿತು.

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಮೆರವಣಿಗೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ಬ್ಯಾಂಡ್, ಚೆಂಡೆ ವಾದ್ಯದೊಂದಿಗೆ ಪಡಂಗಡಿ, ಕುವೆಟ್ಟು, ಸೋಣಂದೂರು ಮತ್ತು ಓಡಿಲ್ನಾಳದ ಭಕ್ತರ ಮೆರವಣಿಗೆ ಮೂಲಕ ಹಸಿರುವಾಣಿ ಸಮರ್ಪಣೆ ನಡೆಯಿತು.ಮೂಲಕ ಭಕ್ತರು ಸಾಗಿದರು.

ಬಳಿಕ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗ್ರಾಮ ಸುಭೀಕ್ಷೇಗಾಗಿ ದೇವರ ಸಂಚಾರಕ್ಕೆ ಗ್ರಾಮಗಳಿಗೆ ಹೊರಟಿರುವ 15 ಭಜನಾ ತಂಡಗಳು, ಮತ್ತೆ ಶ್ರೀ ಕ್ಷೇತ್ರಕ್ಕೆ ಬಂದು ಭಜನಾ ಮಂಗಳೋತ್ಸವ ದೇವಸ್ಥಾನದ ಆವರಣದಲ್ಲಿ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಅವರ ಉಪಸ್ಥಿತಿಯಲ್ಲಿ ದೇವರನ್ನು ಬರಮಾಡಿಕೊಳ್ಳಲಾಯಿತು.ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ರಹ್ಮಕಲಶೋತ್ಸವದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರದಾನ ಕಾರ್ಯದರ್ಶಿ ಚಿದಾನಂದ ಇಡ್ಯ ಮತ್ತು ಕಾರ್ಯದ್ಯಕ್ಷ ಸಂತೋಷ್ ಕುಮಾರ್ ಜೈನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here