Site icon Suddi Belthangady

ಉಜಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

ಉಜಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಉಜಿರೆ ವಲಯ ಇವರ ಸಹಕಾರದಲ್ಲಿ 10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಉಜಿರೆಯ ಚಿತ್ತಾರ ಟೈಲರಿಂಗ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.”ಗ್ರಾಮೀಣ ಪ್ರದೇಶದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯಕ್ರಮ ಆಯೋಜಿಸಿದ್ದು ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ, ಮಹಿಳೆಯರು ತರಬೇತಿ ಪಡೆದು ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವೀಯಾಗಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ, ಉಜಿರೆ ಪಂಚಾಯತ್ ಉಪಾಧ್ಯಕ್ಷ ರವಿ ಬರೆಮೇಲು , ರಾಜ್ಯ ಟೈಲರ್ ಒಕ್ಕೂಟದ ಕ್ಷೇತ್ರ ಸಮಿತಿ ಅಧ್ಯಕ್ಷ ವೇದಾವತಿ ಜನಾರ್ಧನ್, ವಲಯ ಅಧ್ಯಕ್ಷ ರೂಪ ಜಗದೀಶ್, ವಲಯ ಕಾರ್ಯದರ್ಶಿ ಜೀನತ್, ಕ್ಷೇತ್ರ ಕಾರ್ಯದರ್ಶಿ ನಾಗೇಶ್, ತರಬೇತುದಾರರಾದ ಸುಮನ ಉಪಸ್ಥಿತರಿದ್ದರು.

ಜಯ ಚಿದಾನಂದ್ ಕಾರ್ಯಕ್ರಮ ನಿರೂಪಣೆ ಮಾಡಿದರು.ಉಜಿರೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 28 ಮಹಿಳೆಯರು ಈ 10 ದಿವಸದ ತರಬೇತಿ ಪಡೆಯಲಿದ್ದಾರೆ.

Exit mobile version