Site icon Suddi Belthangady

ಮೊಗ್ರು ಶ್ರೀ ಕ್ಷೇತ್ರ ಮುಗೇರಡ್ಕದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಮೊಗ್ರು: ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು ಗ್ರಾಮ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ಜ13ರಂದು, ಜ.13ರಂದು ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ ಜರಗಿತು.

ಬೆಳಗ್ಗೆ 6.30ಕ್ಕೆ ಗಣಹೋಮ, ಬೆಳಗ್ಗಿನಿಂದ ಸಂಜೆಯವರೆಗೆ ಸ್ಥಳೀಯ 10 ಭಜನಾ ಮಂಡಳಿಗಳಿಂದ ಅರ್ಧಏಕಾಹ ಭಜನೆ, ಸಂಜೆ 5.00 ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೋರಂಜನಾ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.00 ರಿಂದ ಸಭಾ ಕಾರ್ಯಕ್ರಮ ನಡೆಯಿತು.

ಸಭಾಧ್ಯಕ್ಷರಾಗಿ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಆಡಳಿತ ಮೋಕ್ತೆಸರರಾದ ರಾಮಣ್ಣ ಗೌಡ ದೇವಸ್ಯ ಗುತ್ತು, ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಸಾಮಾಜಿಕ ಹೋರಾಟಗಾರ ದಿನೇಶ್ ಕುಮಾರ್ ಜೈನ್ ಪುತ್ತೂರು, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಮಂಗಳೂರು ಆವಿಷ್ಕಾರ ಯೋಗ, ಯೋಗ ಚಿಕಿತ್ಸಕರರಾದ ಕುಶಾಲಪ್ಪ ಗೌಡ ನೆಕ್ಕರಾಜೆ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು.ರಾತ್ರಿ 10 ರಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರಿವ್ ಪುತ್ತೂರು ಇವರಿಂದ ನೃತ್ಯ ವೈಭವ ನಡೆಯಿತು.ಈ ಎಲ್ಲಾ ಕಾರ್ಯಕ್ರಮಗಳಿಗೆ ಭಜನಾ ಮಂಡಳಿ ಆಡಳಿತ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಆಡಳಿತ ಮೋಕ್ತೆಸರರಾದ ರಾಮಣ್ಣ ಗೌಡ ದೇವಸ್ಯಗುತ್ತು, ಮನೋಹರ ಗೌಡ ಅಂತರ ಗುತ್ತು, ಭಜನಾ ಮಂದಿರ ಆಡಳಿತ ಸಮಿತಿ ಕಾರ್ಯದರ್ಶಿ ಪುರಂದರ ಗೌಡ ಉಪಸ್ಥಿತರಿದ್ದರು.

Exit mobile version