ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

0

ಬೆಳಾಲು: ಜ.20ರಂದು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು.

ಸಮ್ಮೇಳನದ ಮೂಲಕ ನಮ್ಮ ಕಾವ್ಯ ಪರಂಪರೆಯ ಬಗ್ಗೆ ಮಾಹಿತಿ ಹಾಗೂ ಪ್ರೇರಣೆ ಸಿಗುವಂತಾಗಲಿ, ಅಲ್ಲದೆ ನಮ್ಮ ಸಂಸ್ಕೃತಿಯ ಪ್ರಸಾರಕ್ಕೆ ವಿಶೇಷ ವೇದಿಕೆಯಾಗಲಿ ಎಂದು ಈ ಸಂದರ್ಭದಲ್ಲಿ ಮಾತನಾಡುತ್ತಾ ಹೇಳಿಕೆ ನೀಡಿದರು.

ಈ ಸಂದರ್ಭದಲ್ಲಿ ಗಮಕ ಕಲಾ ಪರಿಷತ್ತಿನ ದ.ಕ.ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ, ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ ಮತ್ತು ಬೆಳಾಲು ಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಬೆಳಾಲು ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here