Site icon Suddi Belthangady

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ರಂದು ಧಾರ್ಮಿಕ ಸಮಾರಂಭ ನಡೆಯಿತು.

ಅಳದಂಗಡಿ ಇಗರ್ಜಿಯ ಧರ್ಮಗುರುಗಳಾದ ರೆ.ಫಾ ಎಲ್ಯಾಸ್ ಡಿ.ಸೋಜಾ ಮಾತಾನಾಡಿ ಎಲ್ಲಾ ಧರ್ಮ ಜಾತಿಯವರು ಶಾಂತಿ ಸಹಬಾಳ್ವೆಯಿಂದ ಬದುಕೋಣ ಎಂದು ಹೇಳಿದರು.

ಬಡಗಕಾರಂದೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್, ಸುಲ್ಕೇರಿ ಶ್ರೀರಾಮ ಶಾಲೆಯ ಅಧ್ಯಕ್ಷ ರಾಜೂ ಪೂಜಾರಿ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ಗ್ರಾ.ಪಂ.ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳ್ತೇದಾರರಾದ ಶಿವಪ್ರಸಾದ್ ಅಜಿಲರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಲಾಯಿತು.

ಸ್ಪರ್ಧಾ ವಿಜೇತರ ಪಟ್ಟಿಯನ್ನು ಶಿಕ್ಷಕರಾದ ಸುನಿಲ್ ಬಾಪಟ್ ವಾಚಿಸಿದರು.ಕಾರ್ಯಕ್ರಮದಲ್ಲಿ ಮೋಹನ್ ಎ.ದಾಸ್ ಉಪಸ್ಥಿತರಿದ್ದರು

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿ.ಸಂದೀಪ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು

Exit mobile version