Site icon Suddi Belthangady

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ, ನರ್ತನ ಸೇವೆ

ಕೊಕ್ಕಡ: ಜ.28ರಂದು ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ ನಡೆಯಲಿದೆ.

ಬಳಿಕ ದಿನಾಂಕ ಫೆ.2 ರಂದು ಶುಕ್ರವಾರ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಿದ ದೈವಗಳಿಗೆ ನರ್ತನ ಸೇವೆ ನಡೆಸಲು ದೈವ ಪರಿಚಾರಕರು, ಪೂಜಾರಿಗಳು, ಮಡಿವಾಳರು, ದೈವ ನರ್ತಕರುಗಳಿಗೆ ಸಂಪ್ರದಾಯದಂತೆ ದೇವಳದ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರವರು ವೀಳ್ಯ ನೀಡಿದರು.

ಈ ಸಂಧರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Exit mobile version