ಮದ್ದಡ್ಕದಲ್ಲಿ ತಹಶೀಲ್ದಾರ್ ರಿಗೆ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನ

0

ಬೆಳ್ತಂಗಡಿ: ತಹಶೀಲ್ದಾರ್ ಪೃಥ್ವಿ ಸಾನಿಕಂ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ, ಪರಿಶೀಲನೆಗಾಗಿ ತೆರಳಿದಾಗ ಸ್ಥಳವನ್ನು ಒತ್ತುವರಿಸಿದ ನಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಲು ಪ್ರಯತ್ನಿಸಿದ ಘಟನೆ ಜ.18ರಂದು ನಡೆದಿದೆ.

ಘಟನೆಯ ವಿವರ:
ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ದಿ ಅಧಿಕಾರಿಗಳೊಂದಿಗೆ, ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ, ಪರಿಶೀಲನೆಗಾಗಿ ತೆರಳಿದಾಗ ಸ್ಥಳವನ್ನು ಒತ್ತುವರಿಸಿದ ನಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ.
ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ ಎಂಬುದಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಬೆಳ್ತಂಗಡಿ ಪೊಲೀಸ್ ಠಾಣೆಯಗೆ ದೂರು ನೀಡಿದ್ದಾರೆ. ಪೊಲೀಸರು ಅಕ್ರ ನಂ 03/2024 ಕಲಂ: 353, 504 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here