ಅಯೋಧ್ಯೆ ಶ್ರೀ ರಾಮನ ಪ್ರಾಣಪ್ರತಿಷ್ಠಾಪನೆಯ ದಿನ ಸಂಭ್ರಮಿಸಲು ಸಜ್ಜಾಗುತ್ತಿರುವ ಬೆಳ್ತಂಗಡಿ ತಾಲೂಕು

0

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರದ ಪ್ರಾಣಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ.

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಸಂಭ್ರಮಿಸಲು ರಾಮಭಕ್ತರು ತಯಾರಿ ನಡೆಸುತ್ತಿದ್ದಾರೆ.ಹಾಗಾಗಿ ಬೆಳ್ತಂಗಡಿಯಲ್ಲಿ ರಾಮನ ಭಾವಚಿತ್ರವಿರುವ ಬಂಟಿಂಗ್ಸ್, ಧ್ವಜ, ಶಾಲುಗಳು, ಟಿ-ಶರ್ಟ್ ಸೇರಿದಂತೆ ಹಲವು ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಬೆಳ್ತಂಗಡಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಹಿನ್ನೆಲೆ ಜನರು ತಮ್ಮ ಬಡಾವಣೆಗಳನ್ನು ಕೇಸರಿಮಯ ಮಾಡಲು ರಾಮಭಕ್ತರು ಸಜ್ಜಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗಲ್ಲಿಗಲ್ಲಿಗಳಲ್ಲಿ ಶ್ರೀ ರಾಮನ ಭಾವಚಿತ್ರವಿರುವ ಬ್ಯಾನರ್ ಗಳು ಹಾಗೂ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಮಭಕ್ತರು ಸಿದ್ಧರಾಗಿದ್ದಾರೆ

LEAVE A REPLY

Please enter your comment!
Please enter your name here