Site icon Suddi Belthangady

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯಲ್ಲಿ ಮಾಸಿಕ ಬೆಂಬಲ ಸಭೆ, ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜ.20ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.

ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಮಾರ್ ಬಿ.ಜೆ.ರವರು ಪೌಷ್ಟಿಕ ಆಹಾರ ವಿತರಿಸಿ, ನಮ್ಮ ಜೀವನ ಬೆಳಕಾಗಿ ಮುಂದುವರಿಯಬೇಕು.ಡಿ.ಕೆ.ಆರ್.ಡಿ.ಸ್ ಸಂಸ್ಥೆಯ ಮೂಲಕ ನಡೆಸುವ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಸಂಸ್ಥೆಗೆ ತಮ್ಮ ಸಹಕಾರವನ್ನು ನೀಡುವುದಾಗಿ ತಿಳಿಸಿದರು.ಪುಷ್ಪರಾಜ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಎ.ಜೆ.ರವರು ನಮ್ಮಲ್ಲಿ ಸಕಾರಾತ್ಮಕ ಚಿಂತನೆಯ ಮೂಲಕ ಜೀವನದಲ್ಲಿ ಶಕ್ತಿಯನ್ನು ಪಡೆಯಬಹುದು ಎಂದು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವು ನಿರಂತರವಾಗಿ ದೇವರ ಕರುಣೆಯಿಂದ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಯೋಜನಾ ಸಂಯೋಜಕಿ ಕುಮಾರಿ ಶ್ರೇಯಾ ಪ್ರಾರ್ಥನೆ ಹಾಡಿದರು.ಮಹಿಳಾ ಸಶಕ್ತತಾ ಯೋಜನೆಯ ಸಂಯೋಜಕಿ ಸಿಸಿಲಿಯ ತಾವ್ರೋರವರು ಎಲ್ಲರನ್ನು ಸ್ವಾಗತಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿ ಕಾರ್ಯಕ್ರಮದ ಸಂಯೋಜಕ ಥೋಮಸ್ ರವರು ವಂದಿಸಿದರು.ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು.

ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Exit mobile version