ಅಯೋಧ್ಯೆಯ ಕಾರ್ಯಕ್ರಮ ಹಿನ್ನೆಲೆ: ವ್ಯಾಪಕ ಮುನ್ನೆಚ್ಚರಿಕೆ- ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ

0

ಬೆಳ್ತಂಗಡಿ: ದಿನಾಂಕ 22.01.2024ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಕೆ.ಎಸ್.ಆರ್.ಪಿ ಪಡೆ ಹಾಗೂ ಡಿ.ಎ.ಆರ್ ಪಡೆಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ ಹಾಗೂ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಠಾಣಾ ಪೊಲೀಸರಿಂದ ಹಗಲು ಗಸ್ತು ಹಾಗೂ ರಾತ್ರಿ ಗಸ್ತನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇದರೊಂದಿಗೆ ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆಯೂ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ. ಸೂಕ್ತ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ರೀತಿಯ ಅಕ್ಷೇಪಾರ್ಹ ಬರಹ ಅಥವಾ ಬಿತ್ತಿಚಿತ್ರಗಳು ಪ್ರದರ್ಶಿಸುವುದು ಅಥವಾ ಅವುಗಳನ್ನು ಅಳವಡಿಸಿದಲ್ಲಿ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು.ತುರ್ತು ಸಂಪರ್ಕಕ್ಕಾಗಿ ದ.ಕ. ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 0824 2220500 ಅಥವಾ 112 ಸಹಾಯವಾಣಿಗೆ ಕರೆ ಮಾಡಲು ವಿನಂತಿ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here