ತೆಂಗಿನ ಮರದಿಂದ ಬಿದ್ದು ಪುದುವೆಟ್ಟು ನಿವಾಸಿ ವಿಶ್ವಾಂಬರನ್ ಮೃತ್ಯು

0

ಬೆಳ್ತಂಗಡಿ: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ.

ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದ ವಿಶ್ವಾಂಬರನ್ (58) ಎಂಬವರು ಮೃತಪಟ್ಟಿದ್ದಾರೆ.

ಮುಂಜಾನೆ ಮನೆಯ ಸಮೀಪದ ಮರದಿಂದ ಶೇಂದಿ ತೆಗೆಯಲು ಮರ ಹತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿಯಾಗಿದ್ದ ಮೃತರು ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ. ಕುತ್ತಾರಿಗೆ ಬಂದು ನೆಲೆಸಿರುವ ಇವರು ಶೇಂದಿ ತೆಗೆಯುವ ಗುತ್ತಿಗೆ ವಹಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here