ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ: ಪಾಂಡವರಕಲ್ಲು: ರಾಜನ್ ದೈವ ಕೊಡಮಣಿತ್ತಾಯ, ಬ್ರಹ್ಮ ಬೈರ್ದೆಕಳ ಗರಡಿಯಲ್ಲಿ ಸಂಭ್ರಮ

0

ಪಾಂಡವರಕಲ್ಲು: ಉತ್ತರಪ್ರದೇಶದ ರಾಜ್ಯದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲಾ ದೇವರ ಪ್ರಾಣಪ್ರತಿಷ್ಠೆ ಜ.22ರಂದು ಪ್ರಧಾನಿ
ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಿತು.

ಶ್ರೀರಾಮನ ಪ್ರತಿಷ್ಠಾಪನೆಯೊಂದಿಗೆ ನೂರಾರು ವರ್ಷಗಳ ಕನಸು ನನಸಾದ ಸಂಭ್ರಮದಲ್ಲಿ ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ, ಶ್ರೀ ಬ್ರಹ್ಮ ಬೈರ್ದೆಕಳ ಗರಡಿಯಲ್ಲಿ ಹಣತೆ ಹಚ್ಚಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಜೀರ್ಣೋದ್ದಾರ ಸಮಿತಿಯ ಸರ್ವ ಸದಸ್ಯರು, ಊರಿನ ಭಕ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here