ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ- ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ ರಾಮೋತ್ಸವ

0

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ರಾಮೋತ್ಸವವು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ ಶ್ರೀ ರಾಮನ ಪೂಜೆ, ಭಜನೆ, ಸಂಗೀತದೊಂದಿಗೆ 1992ರಲ್ಲಿ ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಭಾಗವಹಿಸಿದ್ದ ವೇಣುಗೋಪಾಲ್ ರವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಲ್ಕು ಸಂಸ್ಥೆಯ ಅಧ್ಯಕ್ಷರು, ಚಂದ್ರಕಾಂತ, ಕಲಾವತಿ ಟೀಚರ್, ಲಿಖಿತ್, ಪ್ರಭಾಕರ ಸಿ.ಹೆಚ್, ಸ್ಥಾಪಕ ಅಧ್ಯಕ್ಷ ವಿಶ್ವನಾಥ ಆರ್ ನಾಯಕ್, ವಿಜಯ ಕುಮಾರ್, ಮುಂತಾದವರು ಭಾಗವಹಿಸಿದ್ದರು.

ಪ್ರಮೋದ್ ಆರ್ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿದರು.ಸುಮಾರು 100 ಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಿ, ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ಖಾದ್ಯಗಳನ್ನು ಎಲ್ಲರಿಗೂ ವಿತರಿಸಿ, ಸಂಭ್ರಮದಿಂದ ಆಚರಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ರವರು ವಂದಿಸಿದರು.

LEAVE A REPLY

Please enter your comment!
Please enter your name here