ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ: ಮಕ್ಕಿಮನೆ ಕಲಾವೃಂದ ಸಾಂಸ್ಕ್ರತಿಕ ಕಾರ್ಯಕ್ರಮ

0

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ-2024 ಶ್ರೀ ಮನ್ಮಹಾರಥೋತ್ಸವ ಜ.22ರಂದು ವೈಭವದಿಂದ ಜರಗಿತು.

ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದದ ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಡಾ.ಎ.ಜನಾರ್ಧನ ಶೆಟ್ಟಿ, ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ, ಸನತ್ ಕುಮಾರ್ ಜೈನ್, ನವನೀತ್ ಶೆಟ್ಟಿ ಕದ್ರಿ, ಪ್ರಭಾಕರ ರಾವ್ ಪೇಜಾವರ ಮೊದಲಾದವರು ಉಪಸ್ಥಿತರಿದ್ದು, ಕಲಾವಿದರನ್ನು ಗೌರವಿಸಿದರು.

ರೇಖಾ ರಂಜಿತ್ ಕದ್ರಿ ನಿರೂಪಿಸಿದರು.ಶ್ರೀಕಾಂತ್ ಕೊಂಡಾಣ, ಶ್ರೇಯಾ ಭಟ್, ಭಾಗ್ಯಶ್ರೀ ಭಟ್ ಸಹಕರಿಸಿದರು.

LEAVE A REPLY

Please enter your comment!
Please enter your name here