Site icon Suddi Belthangady

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವೀಕ್ಷಣೆಗಾಗಿ ರಾಜ್ಯ ಸಂಘಟನಾ ಆಯುಕ್ತರಾದ ಸಿ.ಮಂಜುಳಾ ಭೇಟಿ ನೀಡಿರುವರು.

ಈ ಸಂದರ್ಭದಲ್ಲಿ ಶಾಲಾವತಿಯಿಂದ ಅವರನ್ನು ಸನ್ಮಾನಿಸಲಾಯಿತು.ಶಾಲೆಯಲ್ಲಿ ನಡೆಸಿದ ಚಟುವಟಿಕೆಯನ್ನು ವೀಕ್ಷಿಸಿದ ಸಂಘಟನಾ ಆಯುಕ್ತರು ದಳದ ಸಾಧನೆ ಬಗ್ಗೆ ಪ್ರಸಂಸೆ ವ್ಯಕ್ತಪಡಿಸಿದರು.ಜಿಲ್ಲಾ ಪ್ರಶಸ್ತಿ, ರಾಜ್ಯ ಪ್ರಶಸ್ತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆಯು ಉತ್ತಮ ಕಾರ್ಯಗಳನ್ನು ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪದ್ಮ ಕುಮಾರ್ ಸ್ವಾಗತಿಸಿದರು.ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಎಸ್ ಡಿ ಎಮ್‌ ಬೆಳ್ತಂಗಡಿ ಸ್ಕೌಟ್ಸ್ ಗೈಡ್ಸ್ ಸಂಯೋಜಕ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿ, ವಂದಿಸಿದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ರೋಡ್ರಿಗಸ್, ಸ್ಕೌಟ್ ಮಾಸ್ಟರ್ ಮಂಜುನಾಥ್ ಉಪಸ್ಥಿತರಿದ್ದರು.ಗೈಡ್ ವಿದ್ಯಾರ್ಥಿ ಯಶ್ವಿತಾ ಸಹಕರಿಸಿದರು.

Exit mobile version