Site icon Suddi Belthangady

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ

ಕೊಕ್ಕಡ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪತ್ನಿ ಚೆನ್ನಮ್ಮನವರ ಜೊತೆಗೆ ಆಗಮಿಸಿ ದೇವರ ದರ್ಶನ ಪಡೆದರು.ಮಾಜಿ ಪ್ರಧಾನಿ ಅವರಿಗೆ ಕ್ಷೇತ್ರದ ವತಿಯಿಂದ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ, ಮಲಾರ್ಬೀಡು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ, ನವೀನ ಕಜೆ, ವಿಠ್ಠಲ ಕುರ್ಲೆ, ಪುರಂದರ ಕಡೀರ, ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗ, ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು, ಹಾಗೂ ದೇವೇಗೌಡರ ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.

ಇದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎರಡನೇ ಭೇಟಿಯಾಗಿರುತ್ತದೆ.

Exit mobile version