ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ

0

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು.ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ.ಬಿ.ಆರ್.ಅಂಬೇಡ್ಕರ್‌ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ.ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು.ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.ತದನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.

ಸಂಸ್ಥೆಯ ವ್ಯವಸ್ಥಾಪಕಿ ಸಂಧ್ಯಾ ಸುಭಾಷ್‌ರವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here