Site icon Suddi Belthangady

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ

ಪುದುವೆಟ್ಟು: ಜ.26ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ನೆರವೇರಿಸಿದರು.ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಗಣರಾಜ್ಯೋತ್ಸವ ಆಚರಣೆಯ ಮಹತ್ವ ಮತ್ತು ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ವಹಿಸಿಕೊಂಡಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ತೇಜಾವತಿಯವರು ಪ್ರಜಾಪ್ರಭುತ್ವ ದಿನಕ್ಕಾಗಿ ಹೋರಾಟ ನಡೆಸಿದ ಮಹಾನ್ ನಾಯಕರ ಬಗ್ಗೆ ಗುಣಗಾನ ಮಾಡಿದರು.ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಪ್ರಜಾಪ್ರಭುತ್ವ ದಿನದ ಬಗ್ಗೆ ಭಾಷಣವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲೆಯ ಎಲ್ಲಾ ಮಕ್ಕಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಟಿಕ್ಕಾ ಸಾಹೇಬ್ ರವರು ಎಲ್ಲಾ ಮಕ್ಕಳಿಗೆ ಚಾಕೋಲೇಟ್ ನೀಡಿದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ರವರು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಶ್ರೀ ನಿಶಾಂತ್ ರವರು ಸ್ವಾಗತಿಸಿ, ಶ್ರೀಮತಿ ವೇದಾವತಿ ಯವರು ಧನ್ಯವಾದಗೈದ ಕಾರ್ಯಕ್ರಮ ವನ್ನು ಶಾಲೆಯ ಶಿಕ್ಷಕರಾದ ಶ್ರೀ ಪವನ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Exit mobile version