ಉಜಿರೆ ಬ್ಲಾಕ್ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆ

0

ಉಜಿರೆ: ಬ್ಲಾಕ್ ಕಾಂಗ್ರೆಸ್ ಇದರ ಗ್ರಾಮ ಸಮಿತಿಯ ಸಬೆಯು ಜ.28ರಂದು ಉಜಿರೆ ಪಂಚಾಯತ್ ಸಂಜೀವಿನಿ ಹಾಲ್ ನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಆದ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಉಜಿರೆ ಗ್ರಾಮ ಸಮಿತಿಯ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗಾಂಧಿನಗರ ಮತ್ತು ಬ್ಲಾಕ್ ನ ಪ್ರದಾನ ಕಾರ್ಯದರ್ಶಿಗಳು ಪದಾಧಿಕಾರಿಗಳು ಮುಂಚೂಣಿ ಘಟಕದ ಅದ್ಯಕ್ಷರು ಭಾಗವಹಿಸಿದರು.

ನಾಯಕರೆಲ್ಲರೂ ಮಾತನಾಡಿ ಪ್ರತೀ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವಿಕೆ ಮತ್ತು ಸರ್ಕಾರ ನೀಡಿದ ಪಂಚ ಗ್ಯಾರಂಟಿ ಯೋಜನೆಯನ್ನು ಪ್ರತೀ ಬೂತ್ ಮಟ್ಟದಲ್ಲಿ ಪ್ರಚಾರ ಪಡಿಸುವುದು ಮತ್ತು ಈ ಸೌಲಭ್ಯ ಇನ್ನೂ ತಲುಪದವರಿಗೆ ಅದಕ್ಕಾಗಿರುವ ತೊಡಕನ್ನು ನಿವಾರಿಸಿಕೊಡಲು ಬೂತ್ ಮಟ್ಟದ ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಉಜಿರೆ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here