ಸಚಿವ ದಿನೇಶ್ ಗುಂಡೂರಾವ್ ಭೇಟಿಯಾಗಿ ವಿವಿಧ ಬೇಡಿಕೆ ಸಲ್ಲಿಸಿದ ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಭೇಟಿಯಾಗಿ ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ಮೂಲ ಸೌಕರ್ಯಗಳಾದ ಸಿಬ್ಬಂದಿ ವಸತಿ ಗೃಹ ನಿರ್ಮಾಣ, ಶವ ಪರೀಕ್ಷಾ ಕೊಠಡಿ ಮತ್ತು ಶವ ಶೀಥಲೀಕರಣ ಕೇಂದ್ರ ನಿರ್ಮಾಣ, Sweage ಟ್ರೀಟ್ ಮೆಂಟ್ ಪ್ಲ್ಯಾಂಟ್ ನಿರ್ಮಾಣ, ಆಸ್ಪತ್ರೆಯ ಹಿಂದೆ ಮತ್ತು ಮುಂದುಗಡೆ ಕಂಪೌಂಡ್ ದುರಸ್ಥಿ ಕಾಮಗಾರಿಗಳ ಬೇಡಿಕೆಯ ಮನವಿ ಹಾಗೂ ತಾಲೂಕಿನ ಅಭಿವೃದ್ಧಿಯ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತ್ತುಲ್ಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here