ಶಿರ್ಲಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಪದಗ್ರಹಣ

0

ಶಿರ್ಲಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯಿನಕೆರೆ ಯೋಜನೆ ವ್ಯಾಪ್ತಿಯ ಅಳದಂಗಡಿ ವಲಯದ ಶಿರ್ಲಾಲು ಎ ಮತ್ತು ಬಿ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕೃಷ್ಣಪ್ಪ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಲೋಕನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ನಮ್ಮ ದೇವಸ್ಥಾನದಲ್ಲಿ ಈವರೆಗೆ ಮೂರು ಸಲ ಪದಗ್ರಹಣ ಕಾರ್ಯಕ್ರಮವನ್ನು ಮಾಡಿದ್ದು ಬಹಳ ಅಚ್ಚುಕಟ್ಟಾಗಿ ಮಾಡಿರುತ್ತಾರೆ.ಡಾ.ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರಿಗೆ ಉತ್ತಮ ಸಲಹೆ ಸೂಚನೆಗಳನ್ನು ನೀಡುತ್ತಾ ಬಂದಿರುವುದು ಅವಿಸ್ಮರಣೀಯ ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯಿನಕೆರೆ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ನಿಕಟ ಪೂರ್ವ ಪದಾಧಿಕಾರಿಗಳು ಇಂದು ನಿರ್ಗಮನಗೊಂಡು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿದರು.ಮುಂದಿನ ದಿನಗಳಲ್ಲಿ ನಿಮ್ಮ ಒಕ್ಕೂಟದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು ಎಂದು ಶುಭ ಹಾರೈಸಿ ಯೋಜನೆ ಬರುವ ಮೊದಲು ಇದ್ದ ಪರಿಸ್ಥಿತಿ ಹಾಗೂ ಈಗಿನ ಪರಿಸ್ಥಿತಿಯ ಬಗ್ಗೆ ವ್ಯತ್ಯಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಕೋಟ್ಯನ್ ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಎಸ್ ಡಿ ಎಂ ಸಿ ಅಧ್ಯಕ್ಷ ಅಶೋಕ್ ಕುಲಾಲ್, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಕೆ. ಉಪಸ್ಥಿತರಿದ್ದರು.

ಕಮಲಾಕ್ಷಿ ಎಸ್. ಎನ್.ರಾವ್ ಪ್ರಾರ್ಥಿಸಿದರು.ಮೇಲ್ವಿಚಾರಕಿ ಸುಮಂಗಲ ಸ್ವಾಗತಿಸಿದರು.ಸೇವಾ ಪ್ರತಿನಿಧಿ ಚಂದ್ರಾವತಿ ಒಕ್ಕೂಟದ ವರದಿ ಮಂಡನೆ ಮಾಡಿದರು.ಮನೋಹರ ಕಾರ್ಯಕ್ರಮ ನಿರೂಪಿಸಿ, ಸ್ವಚ್ಛತಾ ಸೇನಾನಿ ನಿಲಯ ಗೌಡ ವಂದಿಸಿದರು.

LEAVE A REPLY

Please enter your comment!
Please enter your name here